ಕಳೆದ 2- 3 ದಿನಗಳಿಂದ ನನಗೆ ವಿಪರೀತ ಕುಶಿ ಆಗ್ತಾ ಇದೆ, ಕಾರಣ ಏನು ಅಂತೀರಾ? ಇದೋ ಕೇಳಿ. ಅಂತೂ ಇಂತು ಮುಂಬೈ ನಲ್ಲಿ ಕಟ್ಟಿರೊ ಒಂದು ದೊಡ್ಡ ಸೇತುವೆ ಗೆ ರಾಜೀವ್ ಗಾಂದಿ ಹೆಸ್ರು ಈಡೋ ತೀರ್ಮಾನ ಆಗಿದೆ ಅಂತೆ, ಇದು ಪವಾರ್ ಅವರು ಕೊಡ್ತಾ ಇರೋ ಸಲಹೆ. ಇದನ್ನು ಕೇಳಿ ನಂಗೆ ಹಾಲು ಕುಡಿದಷ್ಟು ಸಂತೋಷ ಆಯಿತು. ರಾಜೀವ್ ವಿಮಾನ ನಿಲ್ದಾಣ, ರಾಜೀವ್ ಬಸ್ ನಿಲ್ದಾಣ, ಇಂದಿರ ಅವಾಸ, ರಾಜೀವ್ ಯುವ ಕೇಂದ್ರ, ಅಂತೆಲ್ಲಾ ಇದ್ರು ನಂಗೆ ಸಮಾಧಾನ ಆಗಿರಲಿಲ್ಲ.
ನವ ಭಾರತ ನಿರ್ಮಾತೃ, ದೇಶಕ್ಕಾಗಿ ಕುಟುಂಬವನೆ ಮುಡುಪು ಇಟ್ಟಿರೋ ನೆಹ್ರು ಮನೆತನದ ದವರ ಹೆಸ್ರು ಇಡೋದು ಅತ್ಯಂತ ಸೂಕ್ತ ಅಂತ ನನ್ನ ಭಾವನೆ. ಆದ್ದರಿಂದ ನನ್ನ ಕಡೆ ಇಂದ ಕೇಂದ್ರ ಸರಕಾರಕ್ಕೆ ಕೆಲವೊಂದು ಸಲಹೆ, ಇನ್ನೂ ಎಲ್ಲೆಲ್ಲಿ ಆ ಮಹಾನು ಭಾವರ ಹೆಸ್ರು ಇಡಬಹುದು ಅಂತ. ದೇಶದಲ್ಲಿ ಇನ್ನೂ ಹಲವು ಯೋಜನೆ ಹಾಗೂ ಸ್ಥಳ ಗಳಿಗೆ ಅವರ ಹೆಸರು ಇಡಬಹುದಾಗಿದೆ. ಇಲ್ಲಿ ಬರೆದಿರುವ ಯೋಜನೆಗಳ ಕರ್ತೃ ನಾನೇ ಆಗಿರುತ್ತೇನೆ, ದಯಮಾಡಿ ಯಾವ ಕಾಂಗ್ರೆಸ್ ಕಾರ್ಯಕರ್ತರು ಇದನ್ನು ಕದಿಯ ಬಾರದು.
ನಮ್ಮ ದೇಶದಲ್ಲಿ ಒಳ್ಳೆಯ ರಾಜಕಾರಣಿ ಗಳು ಬಹಳ ಕಡಿಮೆ, ಒಳ್ಳೆಯ ಜನ ಇದ್ರೂ ಅವರು ರಾಜಕೀಯ ದಿಂದ ನಿವೃತ್ತ ರಾಗಿದ್ದಾರೆ, ಆದ್ದರಿಂದ ಈ ವಂಚಕ ಮಹಾ ಪ್ರಭುಗಳಿಗೆ ಅಂತ ಒಂದು ಜೈಲು ನಿರ್ಮಾಣ ಮಾಡಬೇಕು. ಅವರ ತಪ್ಪು ಗಳು ಸಾಬೀತು ಆಗುವುದು ಬಹಳ ಕಡಿಮೆ, ಆದರೂ ಒಂದು ಜೈಲು ಕಟ್ಟಿಸಬೇಕು, ಹಾಗೂ ಅದಕ್ಕೆ “ರಾಜೀವ್ ಬೋಫರ್ಸ್” ಕಾರಾಗೃಹ ಅಂತ ಹೆಸರಿಸ ಬೇಕು.
ನಮ್ಮ ದೇಶದಲ್ಲಿ ಯಾವಾಗ ಬೇಕಾದ್ರೂ ಬಾಂಬು ಗಳು ಸಿಡಿದು ನಾವೆಲ್ಲ ಸ್ವರ್ಗಸ್ತರಾಗ ಬಹುದು. ಉಗ್ರಗಾಮಿಗಳು ಬಂದು ಗುಂಡಿನ ಮಳೆ ಗೆರೆಯ ಬಹುದು. ಹಾಗಾಗಿ ಉಗ್ರಗಾಮಿಗಳಿಂದ ಸತ್ತವರ ಸಮಾಧಿಗೆ ಅಂತ ರಾಜೀವ್ ರುದ್ರ ಭೂಮಿ ಮಾಡಿಸಬೇಕು. ಮುಂಬೈ, ಕಾಶ್ಮೀರ್ ಗಳಲ್ಲಿ ಜನ ಉಗ್ರರಿಂದ ಸಾಯೋ ಸ0ಖ್ಯೆ ಜಾಸ್ತಿ ಇರೋದ್ರಿಂದ ಅಲ್ಲೆಲ್ಲ ರಾಜೀವ್ ವಿಧ್ಯುತ್ ಚಿತಾಗಾರ ಮಾಡಿದರೆ ಇನ್ನೂ ಒಳ್ಳೇದು.
ನಮ್ಮಲ್ಲಿ ಹಿಂದೂ ಅಂತರ್ಜಾತೀಯ ವಿವಾಹಕ್ಕೆ ಆರ್ಯ ಸಮಾಜ ಇದೆ, ಸರ್ಕಾರವು ಕೂಡಲೇ ಇದನ್ನು ನಿಷೇದಿಸಿ, ಪ್ರತಿ ಊರಲ್ಲೂ ಪ್ರಿಯಾಂಕ ಛತ್ರ ಮಾಡಿಸಬೇಕು. ಮದುವೆ ಏ ಆಗೋಲ್ಲ, ಬರಿ ಇಷ್ಟ ಬಂದಷ್ಟು ದಿನ ಮಜ ಮಾಡ್ಕೊಂಡು ಒಟ್ಟಿಗೆ ಇರ್ತೀವಿ ಅನ್ನೋರಿಗೆ ರಾಹುಲ್ ಗಾಂದಿ ಯೋಜನೆ ಮಾಡಿ ಅವರಿಗೆ ಧನ ಸಹಾಯ ಮಾಡಬೇಕು.
ಬಾಂದ್ರಾ ಮತ್ತು ವೊರ್ಲಿ ಸೇತುವೆ ಗೆ ರಾಜೀವ್ ಹೆಸ್ರು ಇಟ್ಟಾಗಿದೆ, ಆದರೆ ಅದರ ಕೆಳಗಿನ ಸಮುದ್ರದ ಮೀನುಗಳಿಗೆ ರಾಜೀವ್ ಹೆಸ್ರು ಇಟ್ಟಿಲ್ಲ ಅಂತ ಮೀನು ಗಳು ಗೊಳೋ ಅನ್ನುತ್ತಾ ಇದ್ದಾವೆ ಅಂತ ಸುದ್ದಿ ಬಂದಿದೆ. ಆದ್ದರಿಂದ ಸರ್ಕಾರವು ಇನ್ನೂ ಮುಂದೆ ಇಂತಹ ಅವಗಡ ಗಳು ನಡೆಯದಂತೆ , ರಾಜೀವ್ ಅಥವಾ ಇಂದಿರ ಹೆಸರಿಟ್ಟ ಪೋಷಕರಿಗೆ ಉಚಿತ ಸೀರೆ, ಗಂಡಸರಿಗೆ ಎಣ್ಣೆ ಕೊಡಬೇಕು. ಮುಂದೆ ಮಕ್ಕಳಿಗೆ ನಿರುದ್ಯೊಗ ಬತ್ಯೆ ಕೊಡಬೇಕು.
ವಿರೋಧ ಪಕ್ಷಗಳು ಈಗಾಗಲೇ ಈ ಹೆಸರಿಡೊ ಪದ್ದತಿ ಅನುಸರಿಸುತ್ತಾ ಇದ್ದಾವೆ, ಉದಾಹರಣೆಗೆ ಬೆಂಗಳೂರಿನಲ್ಲಿ ಅಟಲ್ ಸಾರಿಗೆ. ಆದ್ದರಿಂದ ಯಾವುದೇ ಸರ್ಕಾರಿ ಯೋಜನೆ ಗಳಿಗೆ ಹೆಸರುಗಳು ಯಾವತ್ತೂ ರಾಜೀವ ಅಥವಾ ಇಂದಿರ ಅಂತಲೇ ಇರಬೇಕೆಂದೂ ಒಂದು ಕಾಯಿದೆ ಅನ್ನು ಹೊರತರ ಬೇಕು..
ನಮ್ಮಲ್ಲಿ ಕೊಡುವ ಬಹುತೇಕ ಪ್ರಶಸ್ತಿ ಗಳಿಗೆ ರಾಜೀವ್ ಮತ್ತೆ ಇಂದಿರ ಹೆಸರಿದೆ. ಆದರೆ ಅತ್ಯುನ್ನತ ಪ್ರಶಸ್ತಿ ಗಳಿಗೆ ಅವರ ಹೆಸರಿಲ್ಲದೇ ಇರುವುದು ನನಗೆ ಪಿಚ್ಚೆನಿಸುತ್ತಾ ಇದೆ. ಕೂಡಲೇ ಭಾರತ ರತ್ನ ವನ್ನು ರಾಜೀವ್ ರತ್ನವೆಂದು, (ರಾಜೀವ್ ಗಾಂದಿ ಖೇಲ್ ರತ್ನ ಇದೆ ಆದ್ರೆ ಅದು ಬೇರೆ) ಜ್ಞಾನ ಪೀಠ ವನ್ನು ಇಂದಿರಾ ಪೀಠ ವೆಂದು ಬದಲಿಸ ಬೇಕು.
ಆಮೇಲೆ ಇಲ್ಲಿ ಬೆಂಗಳೂರಲ್ಲಿ ಇನ್ಫೋಸಿಸ್ ಸುಧಾ ಮೂರ್ತಿ ಅವರು ನಗರದ ಜನನಿಬಿಡ ಸ್ಥಳ ಗಳಲ್ಲಿ “ಪ್ರಕೃತಿ ಕರೆ” ಒಗೋಡಲು ಹಲವು “ನಿರ್ಮಲ ಬೆಂಗಳೂರು” ಮಾಡಿದ್ದಾರೆ, ಕೂಡಲೇ ಸರ್ಕಾರವು ಇದನ್ನು ರಾಷ್ಟ್ರೀಕರಣ ಮಾಡಿ ರಾಜೀವ್ ಹೆಸರು ಇಟ್ಟರೆ ಬಹಳ ಚೆನ್ನಾಗಿರುವುದು.
ಇನ್ನು ಕೋನೇದಾಗಿ ಈ ದೇಶದ ಹೆಸ್ರನ್ನೇ ಬದಲಿಸಿ ಬಿಟ್ಟರೆ ಆಯಿತು, ಇಂಡಿಯಾ ಬದಲು ಇಂದಿರ ಅಂತ ಮಾಡಿದ್ರೆ ಮುಗೀತು.
ಈ ಬೇಡಿಕೆಗಳು ಕೂಡಲೇ ಜಾರಿಗೆ ಬರಬೇಕೆಂದು ನಾನು ಸರ್ಕಾರವನ್ನು ಈ ಬ್ಲಾಗಿನ ಮೂಲಕ ಒತ್ತಾಯ ಪಡಿಸುತ್ತಾ ಇದ್ದೇನೆ. (ಅವರ್ಯಾರು ಇದನ್ನ ನೋಡಲ್ಲ, ಆದ್ರೂ … ಕೂಡ ಹೆವೀ ಒತ್ತಾಯ) ಹಾಗೂ ಸರ್ಕಾರವು ನನ್ನ ಮನವಿ ಯನ್ನು ಅತ್ಯಂತ ಸೂಕ್ಷ್ಮವಾಗಿ ಅವಲೋಕಿಸಿ, ಕಾರ್ಯರೂಪಕ್ಕೆ ತರುತ್ತದೆ ಅಂತ ನಾನು ಭಾವಿಸುವೆ. ನೀವೇನಂತೀರಿ?
ನನ್ನ ಸ್ನೇಹಿತ ಕಳಿಸಿದ ಫೋಟೋ ಇದು. ಸೇತುವೆ ಉದ್ಘಾಟನೆ ಅನಾಮಿಕ ನಿಂದ!!!!!!